Latest

*ಉಸಿರಾಟಕ್ಕೆ ಸಂಬಂಧಿಸಿದ ವಿಚಿತ್ರ ಸೋಂಕು; ಒಂದೇ ದಿನದಲ್ಲಿ 7 ಮಕ್ಕಳ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಉಸಿರಾಟ ಸಂಬಂಧಿತ ಸೋಂಕು ಆರಂಭವಾಗಿದ್ದು, ಈ ಸಮಸ್ಯೆಗೆ ಒಂದೇ ದಿನದಲ್ಲಿ 7 ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಡೆನೋವೈರಸ್ ಎಂಬ ಉಸಿರಾಟದ ಸೋಂಕಿನಿಂದಾಗಿಯೇ ಮಕ್ಕಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೋಲ್ಕತ್ತಾ ಸರ್ಕಾರಿ ಆಸ್ಪತ್ರೆಗಳಲ್ಲಿ 5 ಮಕ್ಕಳು ಹಾಗೂ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಒಂದೇ ದಿನದಲ್ಲಿ ಸಾವನ್ನಪ್ಪಿದ್ದಾರೆ.

Related Articles

ವೈದ್ಯಕೀಯ ಕಾಲೇಜಿನ ವೈದ್ಯರು ಪ್ರಕಾರ ಈ ಮಕ್ಕಳು ಬೇರೆ ಬೇರೆ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇವರು ಅಡೆನೋವೈರಸ್ ನಿಂದ ಸಾವನ್ನಪ್ಪಿದ್ದಾರೆಯೇ ಎಂಬುದನ್ನು ಖಚಿತಪಡಿಸಲು ಕೆಲ ಸಮಯ ಬೇಕು ಎಂದಿದ್ದಾರೆ.

ಎರಡು ದಿನಗಳ ಹಿಂದೆ ಫೆ.28ರಂದು ಕೂಡ ಉಸಿರಾಟದ ಸಮಸ್ಯೆಯಿಂದ ಐವರು ಮಕ್ಕಳು ಕೋಲ್ತತ್ತಾದಲ್ಲಿ ಮೃತಪಟ್ಟಿದ್ದರು. ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಸಮಸ್ಯೆ ಪಶ್ಚಿಮ ಬಂಗಾಳ ಜನತೆಯನ್ನು ಚಿಂತೆಗೀಡು ಮಾಡಿದೆ.

ಇಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ

https://pragati.taskdun.com/the-statue-of-chhatrapati-shivaji-maharaj-will-be-unveiled-today/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button