Latest

*ಕಾರ್ಯಕರ್ತನ ಕಪಾಳಕ್ಕೆ ಬಾರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿದ್ದರಾಮಯ್ಯ ನಿವಾಸದ ಬಳಿ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ತಮ್ಮ ನಾಯಕ ಶಾಸಕ ರಾಮಪ್ಪ ಅವರಿಗೆ ಹರಿಹರ ಕ್ಷೇತ್ರದ ಟಿಕೆಟ್ ಈಬಾರಿಯೂ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ವೇಳೆ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ಆರಂಭವಾಗಿದೆ. ಹರಿಹರ ಮೂಲದ ಕಾರ್ಯಕರ್ತನೊಬ್ಬ ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಾನೆ. ಇದರಿಂದ ಕೋಪಗೊಂಡ ಸಿದ್ದರಾಮಯ್ಯ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಶಾಸಕ ರಾಮಪ್ಪ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಮನೆ ಬಳಿ ಬಂದು ರಾಮಪ್ಪಗೆ ಟಿಕೆಟ್ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ಆರಂಭವಾಗುತ್ತಿದ್ದಂತೆ ಆರಂಭದಲ್ಲಿ ಸಿದ್ದರಾಮಯ್ಯನವರು ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ. ಆದರೂ ಕಾರ್ಯಕರ್ತರು ಸುಮ್ಮನಾಗಿಲ್ಲ. ತಮ್ಮ ನಾಯಕನಿಗೆ ಟಿಕೆಟ್ ನೀಡಬೇಕು ಎಂದು ಘೋಷಣೆ ಕೂಗುತ್ತಾ ಸಿದ್ದರಾಮಯ್ಯನವರನ್ನು ಸುತ್ತುವರೆದಿದ್ದಾರೆ. ಈ ವೇಳೆ ಕಾರ್ಯಕರ್ತರು ನೂಕಾಟ-ತಳ್ಳಾಟ ನಡೆಸಿದ್ದು, ಮಹಿಳಾ ಕಾರ್ಯಕರ್ತರೊಬ್ಬರನ್ನು ಕಾರ್ಯಕರ್ತನೊಬ್ಬ ಜೋರಾಗಿ ತಳ್ಳಿದ್ದಾನೆ. ಸಿಟ್ಟಾದ ಸಿದ್ದರಾಮಯ್ಯ ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದಾರೆ ಎಂದು ತಿಳಿದುಬಂದಿದೆ.

https://pragati.taskdun.com/b-s-yedyurappaamith-shahb-y-vijayendrach/

Home add -Advt

Related Articles

Back to top button