*ಡಿ.ಕೆ.ಸುರೇಶ್ ಚುನಾವಣೆ ಕಣಕ್ಕೆ* *ಯಾವ ಕ್ಷೇತ್ರ ಎನ್ನುವುದೇ ಕುತೂಹಲ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲಿಸಲು ಇಂದು ಕೊನೇ ದಿನವಾಗಿದ್ದು, ಚುನವಣಾ ಅಖಾಡ ಕ್ಷಣ ಕ್ಷಣಕ್ಕೂ ಕುತೂಹಲಕ್ಕೆ ಕಾರಣವಾಗಿದೆ. ನಾನೂ ನಾಮಪತ್ರ ಸಲ್ಲಿಸುತ್ತಿದ್ದೇನೆ. ಯಾವ ಕ್ಷೇತ್ರ ಎಂಬುದನ್ನು ಕಾದು ನೋಡಿ ಎಂದು ಹೇಳುವ ಮೂಲಕ ಸಂಸದ ಡಿ.ಕೆ.ಸುರೇಶ್ ಅಚ್ಚರಿ ಮೂಡಿಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ನಾನು ನಾಮಪತ್ರ ಸಲ್ಲಿಸಲು ಬೆಂಗಳೂರಿಗೆ ಹೋಗುತ್ತಿದ್ದೇನೆ. ಆದರೆ ಯಾವ ಕ್ಷೇತ್ರದಿಂದ ಎಬುದನ್ನು ಈಗಲೇ ಹೇಳುವುದಿಲ್ಲ. ಮಧ್ಯಾಹ್ನ 2:30ರವರೆಗೆ ಕಾದು ನೋಡಿ ಎಂದು ಹೇಳಿದರು.

ಪದ್ಮನಾಭನಗರದಿಂದ ನಾಮಪತ್ರ ಸಲ್ಲಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಯಾವ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂಬುದು ನನಗೂ ಗೊತ್ತಿಲ್ಲ. ವರಿಷ್ಠರ ಸೂಚನೆ ಮೇರೆಗೆ ನಾಮಪತ್ರ ಸಲ್ಲಿಸುತ್ತಿದ್ದೇನೆ. ಯಾವ್ದೋ ಒಂದು ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವುದಂತು ನಿಜ ಎಂದು ತಿಳಿಸಿದರು.

ಡಿ.ಕೆ.ಸುರೇಶ್ ಅವರ ಹೇಳಿಕೆ ಚುನಾವಣಾ ಅಖಾಡದಲ್ಲಿ ಕುತೂಹಲ ಮೂಡಿಸಿದ್ದು, ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆಯಾಗಲಿದ್ದಾರೆಯೇ? ಸಚಿವ ಆರ್.ಅಶೋಕ್ ವಿರುದ್ಧ ಸಂಸದ ಡಿ.ಕೆ.ಸುರೇಶ್ ಕಣಕ್ಕಿಳಿಯಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

https://pragati.taskdun.com/balaji-sugersit-raidvijayapura/
https://pragati.taskdun.com/d-k-sureshnomination-filekanakapuravidhanasabha-election/
https://pragati.taskdun.com/mulabagilucongress-candidatechange/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button