ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಗುರುವಾರ 11 ಗಂಟೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಚಿವ ಸಂಪುಟದ ಸಭೆ ಕರೆದಿದ್ದಾರೆ.
ಶುಕ್ರವಾರ ವಿಧಾನಮಂಡಳದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಸಂಪುಟ ಸಭೆ ಕರೆಯಲಾಗಿದೆ.
ಇದೇ ವೇಳೆ ಮುಖ್ಯಮಂತ್ರಿ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎನ್ನುವ ಮಾಹಿತಿ ಇದೆ.
ಈ ಮಧ್ಯೆ ಗುರುವಾರ ಇಬ್ಬರು ಶಾಸಕಿಯರು ಕಾಂಗ್ರೆಸ್ ಗೆ ರಾಜಿನಾಮೆ ನೀಡುವ ಸಾಧ್ಯತೆ ಇದೆ.