Latest

*ಸಿಎಂ ಕುರ್ಚಿಗಾಗಿ ಮುಂದುವರೆದ ಪೈಪೋಟಿ; ಡಿ.ಕೆ.ಶಿವಕುಮಾರ್ ಗೆ ನಮ್ಮ ಬೆಂಬಲ ಎಂದ ವಿವಿಧ ಮಠಾಧೀಶರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ಸರ್ಕಾರ ರಚನೆ ಕಸರತ್ತು, ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಯುತ್ತಿರುವ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಆಚರಿಸಿದರು.

ಈ ನಡುವೆ ರಾಜ್ಯದ ವಿವಿಧ ಮಠಗಳ ಸ್ವಾಮೀಜಿಗಳು ಸದಾಶಿವನಗರ ನಿವಾಸದಲ್ಲಿ ಸಂಸದ ಡಿ ಕೆ ಸುರೇಶ್ ಅವರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ತಮ್ಮ ಸಮುದಾಯಗಳ ಬೆಂಬಲ ಇದೆ ಎಂದು ತಿಳಿಸಿದರು.

ನಿನ್ನೆ ನಡೆದಿದ್ದ ಒಕ್ಕಲಿಗ ಸಮುದಾಯದ ಪದಾಧಿಕಾರಿಗಳ ಸಭೆಯಲ್ಲಿಯೂ ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ ಮೊದಲಾದವರು ಈ ಬಾರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದರು.

Home add -Advt

https://pragati.taskdun.com/d-k-shivakumarsiddharaiahcongressclp-meetingvidhanasabha-election/

Related Articles

Back to top button