ಶನಿವಾರ 12.30ಕ್ಕೆ ಸಿಎಂ, ಡಿಸಿಎಂ ಜೊತೆ ಹಲವರ ಪ್ರಮಾಣ ವಚನ, ಏಕೈಕ ಡಿಸಿಎಂ

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವೀಕ್ಷಕರಾದ ಸುಶೀಲ್ ಕುಮಾರ್ ಶಿಂದೆ, ಜೀತೇಂದ್ರ ಸಿಂಗ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕ, ನಿಯೋಜಿತ ಸಿಎಂ ಸಿದ್ದರಾಮಯ್ಯ, ನಿಯೋಜಿತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನಾಯಕ ಬಿ ಕೆ ಹರಿಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕದ ನೂತನ ಸರಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬರುತ್ತಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ ಉಪಮುಖ್ಯಮಂತ್ರಿಯಾಗಿ ಹಾಗೂ ಹಲವು ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದೆ.

ವಿಶೇಷವೆಂದರೆ ಡಿ.ಕೆ.ಶಿವಕುಮಾರ ಈ ಸರಕಾರದ ಏಕೈಕ ಉಪಮುಖ್ಯಮಂತ್ರಿಯಾಗಲಿದ್ದಾರೆ. ಜೊತೆಗೆ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ಮಾತ್ರ ಮೊದಲ ಹಂತದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವುದು ಸಹ ಸುಳ್ಳಾಗಿದೆ.

ಗುರುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ನಂತರ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಈ ಕುರಿತು ಮಾಹಿತಿ ನೀಡಿದರು.

Home add -Advt
ರಾಜ್ಯಪಾಲರನ್ನು ಭೇಟಿಯಾಗಿ ಸಿದ್ದರಾಮಯ್ಯ ಸರಕಾರ ರಚನೆಗೆ ಹಕ್ಕು ಮಂಡಿಸಿದರು
https://pragati.taskdun.com/we-have-not-lost-confidence-bounce-back-in-the-state/

Related Articles

Back to top button