Latest
*ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ ಸಂಭವಿಸಿದೆ.
ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಹೇಮಂತ್, ನವೀನ್, ಶರತ್ ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
https://pragati.taskdun.com/karnatakarainimd/




