Latest

*ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ; ರಾಜ್ಯ ಸರ್ಕಾರ ಆದೇಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತಿಚೆಗಷ್ಟೇ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇಂದು ಮತ್ತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಪಿಎಸ್ ಅಧಿಕಾರಿಗಳಾದ ಡಾ.ಸಿಮಿ ಮರಿಯಂ ಜಾರ್ಜ್ ಹಾಗೂ ಅರುಣ್ ರಂಗರಾಜನ್ ಅವರನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ.

ಡಾ.ಸಿಮಿ ಮರಿಯಂ ಅವರನ್ನು ಬೆಂಗಳೂರು ಎಐಜಿಪಿ, ಅಪರಾಧ ವಿಭಾಗಕ್ಕೆ ಹಾಗೂ ಅರುಣ್ ರಂಗರಾಜನ್ ಅವರನ್ನು ಹುಬ್ಬಳ್ಳಿ ಎಸ್ ಪಿ, ಎಎಸ್ ಡಿ ಉತ್ತರ ವಿಭಾಗಕ್ಕೆ ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.


Home add -Advt

Related Articles

Back to top button