Kannada NewsKarnataka NewsLatest

*ಭೀಕರ ಬಸ್ ಅಪಘಾತ; ಬೆಳಗಾವಿ ಮೂಲದ ಚಾಲಕ ಸೇರಿ ಇಬ್ಬರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಟೆಬೆನ್ನೂರಿನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಗೆಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬೆಳಗವೈ ಮೂಲದ ಬಸ್ ಚಾಲಕ ಸದಾನಂದ (50) ಹಾಗೂ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ.

ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಬೆಂಗಳೂರಿನಿಂದ ಮೀರಜ್ ಗೆ ತೆರಳುತ್ತಿತ್ತು ಎನ್ನಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button