Kannada NewsLatest

*ರಾಯಗಢದಲ್ಲಿ ಭೀಕರ ಭೂಕುಸಿತ; ಸಾವಿನ ಸಂಖ್ಯೆ 22ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ; ರಾಯಗಢ; ಮಹಾರಾಷ್ಟ್ರದ ರಾಯಗಢದಲ್ಲಿ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಸಂಭವಿಸುತ್ತಿದೆ. ರಾಯಗಢದ ಖಲಾಪುರ್ ತಹಶಿಲ್ ನ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಭೂ ಕುಸಿತದಲ್ಲಿ ಈವರೆಗೆ 22 ಜನರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣಾ ಕಾರಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Home add -Advt

ಭೂಕುಸಿತದಲ್ಲಿ 86 ಜನರು ನಾಪತ್ತೆಯಾಗಿದ್ದು, ಅವರ ಬಗ್ಗೆ ಇನ್ನೂ ಪತ್ತೆಯಾಗಿಲ್ಲ. ಭಾರಿ ಮಳೆಯಿಂದಾಗಿ ನಿನ್ನೆ ರಕ್ಷಣಾ ಕಾರ್ಯಾಚಹ್ರಣೆಗೆ ಅಡ್ಡಿಯಾಗಿತ್ತು. ಇಂದು ನಾಲ್ಕು ಎನ್ ಡಿ ಆರ್ ಎಫ್ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಭಾಗದಲ್ಲಿ 48 ಕುಟುಂಬಗಳು ವಾಸವಾಗಿದ್ದವು. 17 ಮನೆಗಳು ಭೂ ಕುಸಿತದ ಅವಶೇಷಗಳಡಿ ಸಿಲುಕಿಕೊಂಡಿವೆ.


Related Articles

Back to top button