Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಮತ್ತೋರ್ವ ವ್ಯಕ್ತಿ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮೂಡಲಗಿ ತಾಲೂಕಿನ ಹೂಸಯರಗುದ್ರಿ ಗ್ರಾಮದ ನಿವಾಸಿಯಾದ ಕೃಷ್ಣಾ ನಾಗಪ್ಪಾ ಮಾದರ (28) ನಾಪತ್ತೆಯಾಗಿರುವವರು. ಜೂನ್.15 ರಂದು ಮದ್ಯಾಹ್ನ 1 ಗಂಟೆಗೆ ಯಾರಿಗೂ ಹೇಳದೆ ಮನೆಯಿಂದ ಹೋದವನು ಮರಳಿ ಮನೆಗೆ ಬಂದಿಲ್ಲ ಎಂದು ಇವರ ಸಹೋದರ ಸುಭಾಷ ನಾಗಪ್ಪ ಮಾದರ ಪೊಲೀಸರಿಗೆ ದೂರು ನೀಡಿದ್ದಾರೆ.

ಕುಲಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಣೆಯಾದ ವ್ಯಕ್ತಿಯ ಚಹರೆ ಪಟ್ಟಿ:
ಎತ್ತರ 5. ಅಡಿ 7 ಇಂಚು, ಸಾದಾಗಪ್ಪು ಮೈ ಬಣ್ಣ ಸದೃಢ ಮೈಕಟ್ಟು ಇದ್ದು, ಬಿಳಿ ಬಟ್ಟೆ ಕಪ್ಪು ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ, ಹಿಂದಿ ಭಾಷೆ ಬಲ್ಲವರಾಗಿರುತ್ತಾರೆ.

ಸದರಿ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕುಲಗೋಡ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 083342-222233 ಗೆ ಸಂಪರ್ಕಿಸಬಹುದು ಎಂದು ಕುಲಗೋಡ ಪೊಲೀಸ ಠಾಣೆಯ ಆರಕ್ಷಕ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button