
ಇಂದೇ ಯಡಿಯೂರಪ್ಪ ಪ್ರಮಾಣವಚನ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದೇ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇದೀಗ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಅನುಮತಿ ಕೇಳುವುದಾಗಿ ತಿಳಿಸಿದ್ದಾರೆ.
ಇದರಿಂದಾಗಿ ಬಿಜೆಪಿ ಹೈಕಮಾಂಡ್ ಬಿಜೆಪಿ ಸರಕಾರ ರಚನೆಗೆ ಅನುಮತಿ ನೀಡಿದಂತಾಗಿದೆ.