Film & EntertainmentKannada NewsKarnataka NewsLatest

*ನಟ, ನಿರ್ಮಾಪಕ ವಿರೇಂದ್ರ ಬಾಬು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ವಿರೇಂದ್ರಬಾಬು ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ವಿರೇಂದ್ರ ಬಾಬು ನನ್ನು ಕೋಡಿಗೆಹಳ್ಳಿ ಪೊಲಿಸರು ಬಂಧಿಸಿದ್ದಾರೆ.

ಮಹಿಳೆಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ. ಬಳಿಕ ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್ ಮಾಡಿ 15 ಲಕ್ಷಕ್ಕೆ ವಿರೇಂದ್ರ ಬಾಬು ಬೇಡಿಕೆ ಇಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಜುಲೈ 30ರಂದು ಮಹಿಳೆಯನ್ನು ಕರೆದು ಗನ್ ಇಟ್ಟು ಬೆದರಿಕೆ ಹಾಕಿ ಕಳುಸಿದ್ದಾರೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿರೇಂದ್ರಬಾಬು ವಿರುದ್ಧ ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಪ್ರಕರಾ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Home add -Advt


Related Articles

Back to top button