Kannada NewsKarnataka NewsLatest

*ದಕ್ಷಿಣ ಒಳನಾಡು, ಕರಾವಳಿಯ ಈ ಜಿಲ್ಲೆಗಳಲ್ಲಿ ಮಳೆ ಮನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವೆಡೆ ಆಗಸ್ಟ್ 19ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 19ರವರೆಗೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನು ಬೆಳಗಾವಿ, ಬೀದರ್, ಧರವಾಡ, ಗದಗ, ಕಲಬುರ್ಗಿ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿಯೂ ಕೆಲವೆಡೆ ಮಳೆಯಾಗಲಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button