Kannada NewsKarnataka NewsLatestPolitics
*ವಿಧಾನ ಪರಿಷತ್ ಸದಸ್ಯತ್ವ: ಮೂವರ ಹೆಸರಿಗೆ ರಾಜ್ಯಪಾಲರ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿದ್ದ ಮೂವರ ಹೆಸರಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮೋದನೆ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ನಟಿ ಉಮಾಶ್ರೀ, ಎಂ.ಆರ್.ಸೀತಾರಾಮ್ ಹಾಗೂ ಸುಧಾಮ್ ದಾಸ್ ಅವರ ಹೆಸರನ್ನು ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ರಾಜ್ಯ ಸರ್ಕಾರದ ನಾಮನಿರ್ದೇಶನಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಉಮಾಶ್ರೀ, ಎಂ.ಆರ್.ಸೀತಾರಾಮ್ ಹಾಗೂ ಸುಧಾಮ್ ದಾಸ್ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.


