Kannada NewsKarnataka NewsLatest
*ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡಿದ ಬಿಬಿಎಂಪಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗುತ್ತಿಗೆದಾರರ ಹೋರಾಟಕ್ಕೆ ಮಣಿದ ಬೃಹತ್ ಬೆಂಗಳೂರು ಮಹಾನಗರ ಪಾಅಲಿಕೆ-ಬಿಬಿಎಂಪಿ ಕೊನೆಗೂ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡಿದೆ.
೨೫ ಲಕ್ಷದೊಳಗೆ ಕಾಮಗಾರಿ ನಡೆಸಿದ ಗುತ್ತಿಗೆದಾರರ ಬಾಕಿ ಹಣವನ್ನು ಬಿಬಿಎಂಪಿ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ೪೨ ಕೋಟಿ ರೂಪಾಯಿ ಬಿಡುಗಡೆಯಾಗಿದೆ.
ಸಣ್ಣ ಗುತ್ತಿಗೆದಾರರ ಬಿಲ್ ಕ್ಲಿಯರೆನ್ಸ್ ಗಾಗಿ ಮೊದಲ ಹಂತದಲ್ಲಿ ಬಾಕಿ ಹಣ ಬಿಡುಗಡೆ ಮಾಡಲಾಗಿದ್ದು, ತನಿಖಾ ವರದಿ ಬಂದ ಬಳಿಕ ಉಳಿದ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.



