Belagavi NewsBelgaum NewsKannada NewsKarnataka News

ಬೆಳಗಾವಿ ವಾರ್ತಾ ಇಲಾಖೆಯ ಪತ್ರಕರ್ತರ ವಾಹನಕ್ಕೆ ಹಸಿರು ನಿಶಾನೆ

ಪತ್ರಕರ್ತರ ವಾಹನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ರೌಂಡ್ಸ್


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪತ್ರಕರ್ತರ ನೂತನ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಗರದ ಬುಡಾ ಆವರಣದಲ್ಲಿ ಮಂಗಳವಾರ (ಸೆ.೫) ನೂತನ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು.
ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪತ್ರಕರ್ತರ ಪ್ರವಾಸಕ್ಕಾಗಿ ನೂತನ ವಾಹನವು ಅನುಕೂಲವಾಗಲಿದೆ ಎಂದು ಹೇಳಿದರು.
ನಂತರ ಇದೇ ವಾಹನದಲ್ಲಿ ಪ್ರಯಾಣಿಸಿದ ಸಚಿವರು, ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕಾಗಿ ಅಶೋಕ ನಗರದ ಬಳಿ ಪಾಲಿಕೆಯ ಜಾಗೆಯನ್ನು ಪರಿಶೀಲಿಸಿದರು.

ಶಾಸಕ ಆಸೀಫ್(ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ, ಮಾಧ್ಯಮ ಪ್ರತಿನಿಧಿಗಳು ಸಚಿವರೊಂದಿಗೆ ವಾರ್ತಾ ಇಲಾಖೆಯ ನೂತನ ವಾಹನದಲ್ಲಿ ಪ್ರಯಾಣಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button