Belagavi NewsBelgaum NewsKannada NewsKarnataka NewsLatestNationalUncategorized

ವಂದೇ ಭಾರತ್ ರೈಲು ಪ್ರಾರಂಭಿಸಲು ಸಂಸದ ಈರಣ್ಣ ಕಡಾಡಿ ಒತ್ತಾಯ

ಪ್ರಗತಿವಾಹಿನಿ ಸುದ್ದಿ, ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ, ಬೆಳಗಾವಿ-ಗೋವಾ ನಡುವೆ ಫಾಸ್ಟ್ ಪ್ಯಾಸೇಂಜರ ಮತ್ತು ಬೆಳಗಾವಿ ಪುಣೆ ನಡುವೆ ವಂದೇ ಭಾರತ್ ರೈಲನ್ನು ಪ್ರಾರಂಭಿಸಲು ಒತ್ತಾಯಿಸಿದರು.

ಜೊತೆಗೆ ಕಿತ್ತೂರಿನಲ್ಲಿ ರೈಲುಗಳ ಬಿಡಿ ಭಾಗಗಳ ತಯಾರಿಕೆಗೆ ಕಾರ್ಖಾನೆ ಪ್ರಾರಂಭಿಸುವುದು ಮತ್ತು ಮುಂಬೈ-ಗದಗ ರೈಲನ್ನು ಬಳ್ಳಾರಿವರೆಗೆ ವಿಸ್ತರಿಸಲು ವಿನಂತಿಸಿದರು.

ಸಂಸದರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ರಾಜ್ಯಸಭಾ ಸಂಸದ ಕೆ. ನಾರಾಯಣ ಅವರು ಉಪಸ್ಥಿತರಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button