Belagavi NewsBelgaum NewsKannada NewsKarnataka News

ಜೈನ ಅಭಿವೃದ್ದಿ ನಿಗಮ ಸ್ಥಾಪನೆಗೆ ಕ್ರಮ – ಸಚಿವೆ ಲಕ್ಷ್ಮೀ  ಹೆಬ್ಬಾಳಕರ ಭರವಸೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜೈನ ಸಮಾಜದ ಬಹುದಿನಗಳ ಬೇಡಿಕೆಯಾ​ಗಿರುವ ಜೈನ ಅಭಿವೃದ್ದಿ ನಿಗಮ ಸ್ಥಾಫನೆ ಮಾಡಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಭರವಸೆ ನೀಡಿದರು.
ಬೆಳಗಾವಿಯ ಹಲಗಾ  ಗ್ರಾಮದಲ್ಲಿ​ ಬುಧವಾರ ಜೈನ ಯುವ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾ​ಗಿದ್ದ ಶಾಂತಿಸಾಗರ ಸಂಸ್ಕಾರ ಬಂಧನ ಶಿಬಿರದ ಎಂಟನೇಯ ದಿನದ ರ‍್ಯಾಲಿಯನ್ನು ಹಾಗೂ ಪಂಚಾಮೃತ ಅಭಿಷೇಕ ಪೂಜಾ ಸಮಾರಂಭವನ್ನು ಉದ್ಘಾಟಿಸಿ​ ಅವರು ಮಾತನಾಡಿದ​ರು.

​ ಜೈನ  ಅಭಿವೃದ್ದಿ ನಿಗಮ ಸ್ಥಾಪಿಸಬೇ​ಕೆಂಬುದು ಜೈನ ಸಮಾಜದ ಹಲವು ದಿನಗಳ ಬೇಡಿಕೆಯಾಗಿದೆ. ಆಚಾರ್ಯ ಶ್ರಿ ಸಿದ್ದಸೇನ ಮುನಿಗಳು ಮತ್ತು ಇನ್ನಿ​ತರ ಸ್ವಾಮಿಗಳು ಸಮಾಜದ ಪ್ರಮುಖರು ಈ ಬಗ್ಗೆ ಸರಕಾರಕ್ಕೆ ಮನವಿಯನ್ನು ಮಾಡಿಕೊಂಡಿದ್ದಾರೆ. ಈ ಮನವಿಯನ್ನು  ಆಧರಿಸಿ ಈಗಾಗಲೆ ನಿಗಮ ಸ್ಥಾಪನೆಯ ಪ್ರಸ್ತಾವ​ನೆಯನ್ನು ಮುಖ್ಯಮಂತ್ರಿ​ಗಳ ಕಚೇರಿಗೆ ಕಳುಹಿಸಲಾಗಿದ್ದು, ​ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಅವರು ತಿಳಿಸಿದರು.


ಜೈನ ಸಮಾಜ ಅಹಿಂಸೆಯ ತತ್ವದ ಆಧಾರದ ಮೇಲೆ ನಡೆಯುತ್ತ ಬಂದಿದೆ. ಇಂದು ಈ ಸಂಸ್ಖಾರ  ಬಂಧನದ ಶಿಬಿರ ಶೋಭಾ ಯಾತ್ರೆಯಲ್ಲಿ ಭಾಗವಹಿಸಿದ ನಂತರ ಜೈನ ಧರ್ಮದ ಬಗ್ಗೆ ಇನ್ನಷ್ಟು ಹೆಚ್ಚಿನ ಜ್ಞಾನ ಪಡೆದುಕೊಂಡಂತಾಗಿದೆ. ಅಹಿಂಸೆ, ಅಹಂ, ರಾಗ,​ ದ್ವೇಷಗಳ ತ್ಯಾಗ ಇವೆಲ್ಲವನ್ನು ಆಚಾರ್ಯ ಸಿದ್ದಸೇನ ಮುನಿಗಳು  ಯಾತ್ರೆಯ ವೇಳೆ ತಿಳಿಸಿಕೊಟ್ಟಿದ್ದಾರೆ. ಶ್ರೀಗಳ ಹಾಗೂ ಹಲಗಾ ಗ್ರಾಮಸ್ಥರ ಬೇಡಿಕೆಯಂತೆ ಇಲ್ಲಿನ ಬಸದಿಯ ಅಭಿವೃದ್ದಿಗಾಗಿ ಈಗಾಗಲೇ ೫೦ ಲಕ್ಷ ರೂ​. ಅನುದಾನ  ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಇನೂ ೫೦ ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿ ರವಿರಾಜ ಪಾಟೀಲ ಅವರು ಮಾತನಾಡಿ,​ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಸಾಕಷ್ಟು ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದಾರೆ. ಜೈನ ಸಮಾಜದ ಎಲ್ಲ ಬೇಡಿಕೆಗಳನ್ನು  ಅವರು ಶೀಘ್ರವೇ ನೆರವೇರಿಸಲಿದ್ದಾರೆ​ನ್ನುವ ವಿಶ್ವಾಸವಿದೆ ಎಂದರು.
ವೇದಿಕೆ ಮೇಲೆ ಭರತೇಶ ಶೀಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಡಣ್ಣವರ, ರಾಜೇಂದ್ರ ಜಕ್ಕನ್ನವರ​, ಸುಕುಮಾರ ಹುಡೇದ್, ಮಹಾವೀರ ಬೆಲ್ಲದ, ಸುನಿತಾ ಬೆಲ್ಲದ, ಮಹಾವೀರ ಪಾಟೀಲ,​ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. 

ಕಾರ್ಯಕ್ರಮದ ಸಾನಿಧ್ಯವನ್ನು​ ಆಚಾರ್ಯ  ಶ್ರೀ ಸಿದ್ದಸೇನ ಮುನಿ ಮಹಾರಾಜರು ವಹಿಸಿ ಆರ್ಶಿವಚನ ನೀಡಿದರು.  ಇದೆ ಸಂದರ್ಭದಲ್ಲಿ ಹಲಗಾ ಜೈನ ಸಮಾಜದ ವತಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಹಾಗೂ ಇನ್ನಿತರ ಗಣ್ಯರನ್ನು ಸನ್ಮಾ​ನಿಸಿ ಗೌರವಿಸಲಾಯಿತು. ಸಂಸ್ಕಾರ ಬಂಧನದ ಶೋಭಾ ಯಾತ್ರೆಯು ಹಲಗಾ ಗ್ರಾಮದಲ್ಲಿ ನಡೆದು, ಕೊನೆಯಲ್ಲಿ ಬಸದಿಯಲ್ಲಿ ಪಂಚಾಮೃತ ಪೂಜೆಯೊಂದಿಗೆ ಮುಕ್ತಾಯಗೊಂಡಿತು.

​ 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button