Kannada NewsKarnataka NewsLatest
*BMTC ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಎಂಟಿಸಿ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿದ್ದಾರೆ. ಬಸ್ ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ಹೀಗೆ ಕೆಳಗೆ ಬಿದ್ದ ಸವಾರನ ಮೇಲೆಯೇ ಬಸ್ ಹರಿದು ಹೋಗಿದೆ.
ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಯಲಹಂಕದ ಅಟ್ಟೂರಿನ ಮದರ್ ಡೈರಿ ಬಳಿ ಈ ಅಪಘಾತ ಸಂಭವಿಸಿದೆ. ಭರತ್ ರೆಡ್ಡಿ ಮೃತ ಯುವಕ.
ಇಂಜಿನಿಯರಿಂಗ್ ಮುಗಿಸಿದ್ದ ಭರತ್ ರೆಡ್ಡಿ, ಸಿವಿಲ್ ಕಾಂಟ್ರ್ಯಾಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಅಟ್ಟೂರಿನ ಕಡೆಯಿಂಸ ಸ್ಕೂಟರ್ ನಲ್ಲಿ ಬರುತ್ತಿದ್ದ ಭರತ್ ಕಿರಿದಾದ ರಸ್ತೆಯಲ್ಲಿ ಬಸ್ ಓವರ್ ಟೇಕ್ ಮಾಡಲು ಹೋಗಿ ದುರಂತಕ್ಕೀಡಾಗಿದ್ದಾರೆ.
ಯಲಹಂಕ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




