Kannada NewsKarnataka NewsLatestPolitics

*ಕುಮಾರಣ್ಣ ಹಿಂದೆ ಏನು ಮಾಡಿದ್ದರು, ಮುಂದೆ ಏನು ಮಾಡಲು ಹೊರಟಿದ್ದಾರೆ ಎಂಬುದನ್ನು ಹೇಳಿದ್ದಾರೆ: ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಮಾರಣ್ಣ ಹಿಂದೆ ಏನು ಮಾಡಿದ್ದರು, ಮುಂದೆ ಏನು ಮಾಡಲು ಹೊರಟಿದ್ದಾರೆ ಎಂಬುದನ್ನು ತಮ್ಮ ಹೇಳಿಕೆ ಮೂಲಕ ತಿಳಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಅವರು ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯಿಸಿದರು. ‘ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ, ಮತ್ತೆ ಶಾಶ್ವತವಾಗಿ ಹೋದರೂ ಅಚ್ಚರಿ ಇಲ್ಲ’ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತ ಮಾಧ್ಯಮಗಳ ಪ್ರಶ್ನೆಗೆ ಡಿಸಿಎಂ ಈ ರೀತಿ ಉತ್ತರಿಸಿದರು.

ಕುಮಾರಸ್ವಾಮಿ ಅವರು ತಮ್ಮ ಪ್ಲಾನ್ ಏನಿದೆ ಎಂಬುದನ್ನು ಹೇಳಿದ್ದಾರೆ. ಅವರು ಏನೆಲ್ಲಾ ಮಾಡಲು ಸಾಧ್ಯವೋ ಅದನ್ನು ಹೇಳಿದ್ದಾರೆ. ಈ ಹಿಂದೆ ಅವರು ಮುಖ್ಯಮಂತ್ರಿಯಾಗಿದ್ದಾಗ ನನ್ನ ತಂಗಿ, ತಮ್ಮ ಹಾಗೂ ನನ್ನ ಹೆಂಡತಿ ಮೇಲೆ ಕೇಸ್ ಹಾಕಿದ್ದನ್ನು ಈಗ ನೆನಪಿಸಿಕೊಂಡಿದ್ದಾರೆ. ಮುಂದೆ ಏನು ಮಾಡಬೇಕು ಅಂದುಕೊಂಡಿದ್ದಾರೋ ಅದನ್ನು ಹೇಳಿದ್ದಾರೆ. ಈ ವಿಚಾರವಾಗಿ ಮುಂದೆ ಮಾತನಾಡೋಣ” ಎಂದು ತಿಳಿಸಿದರು.

Home add -Advt

ಮೈತ್ರಿ ಸರ್ಕಾರ ಬೀಳಲು ಡಿ.ಕೆ ಶಿವಕುಮಾರ್ ಅವರೇ ಕಾರಣ, ಈ ಸರಕಾರ ಶೀಘ್ರ ಉರುಳಿ ಹೋಗುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಬಹಳ ದೊಡ್ಡವರು. ಅವರ ನುಡಿಮುತ್ತುಗಳು ಏನಿವೆ? ಅವರು ಏನು ಹೇಳಿದ್ದಾರೆ ಎಂದು ಸಂಪೂರ್ಣವಾಗಿ ಮಾಹಿತಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ ಎಂದರು.

Related Articles

Back to top button