Kannada NewsKarnataka NewsLatest

*ಭೀಕರ ಅಪಘಾತ; 12 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಲಾರಿ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸಾವನ್ನಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ಎದುರೇ ಈ ದುರಂತ ಸಂಭವಿಸಿದೆ. ಇಂದು ನಸುಕಿನ ಜಾವ ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದಿದೆ.

Home add -Advt

ಪರಿಣಾಮ ಟಾಟಾ ಸುಮೋದಲ್ಲಿದ್ದ 12 ಜನರು ಮೃತಪಟ್ಟಿದ್ದಾರೆ. ಟಾಟಾ ಸುಮೋ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ಹೋಗುತ್ತಿತ್ತು. ದಟ್ಟ ಮಂಜಿನ ಹಿನ್ನೆಲೆಯಲ್ಲಿ ಟಾಟಾ ಸುಮೋ ಚಾಲಕನಿಗೆ ಸರಿಯಾಗಿ ರಸ್ತೆ ಕಾಣದೇ ಈ ಅಪಘಾತ ಸಂಭವಿಸಿದೆ. ಮಹಿಳೆಯರು, ಮಕ್ಕಳು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ.

Related Articles

Back to top button