Latest

ಮುಖ್ಯಮಂತ್ರಿ ಬೆಳಗಾವಿಗೆ ಏಕೆ ಬರುತ್ತಿಲ್ಲ? -ಇಲ್ಲಿದೆ ಕಾರಣ

ಮುಖ್ಯಮಂತ್ರಿ ಬೆಳಗಾವಿಗೆ ಏಕೆ ಬರುತ್ತಿಲ್ಲ? -ಇಲ್ಲಿದೆ ಕಾರಣ

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು-

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿರುವ ಯಡಿಯೂರಪ್ಪ ನಾಳೆ ವೈಮಾನಿಕ ಸಮೀಕ್ಷೆ ನಡೆಸುವ ವಿಷಯ ಪ್ರಕಟಿಸಿದ್ದಾರೆ.

Home add -Advt

ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು ಮೊದಲಾದೆಡೆ ಭಾರಿ ಪ್ರಮಾಣದಲ್ಲಿ ಪ್ರವಾಹ ಬಂದಿದೆ. ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳು ವೀಡಿಯೋ ಕಾನ್ಫರೆನ್ಸ್ ನಲ್ಲಿ ಮಾಹಿತ ಪಡೆದಿದ್ದಾರೆ.

ನಾಳೆ ಬೆಳಗ್ಗೆ ವಿಮಾನದ ಮೂಲಕ ಬಳ್ಳಾರಿಗೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ರಾಯಚೂರು, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಪ್ರವಾಹ ಪರಿಸ್ಥಿತಿಯನ್ನು ಅವರು ಪರಿಶೀಲಿಸಿ, ವಿಜಯಪುರದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ – ಸಿಎಂ ಬೆಳಗಾವಿಗೆ ಬರುವುದಿಲ್ಲ!

 

ಬೆಳಗಾವಿಗೆ ಏಕೆ ಇಲ್ಲ?

ಹಾಗೆ ನೋಡಿದರೆ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ಬೇರೆ ಕಡೆಗಳಿಗಿಂತ ಗಂಭೀರವಾಗಿದೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಮಹಾರಾಷ್ಟ್ರದಿಂದ ಹರಿಯುವ ನೀರಿನ ಪ್ರಮಾಣ ಹೆಚ್ಚುತ್ತಲೇ ಇದೆ. ಹಲವಾರು ಹಳ್ಳಿಗಳು ನಡುಗಡ್ಡೆಗಳಾಗಿವೆ. ಹಲವು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ. ಈಗಾಗಲೆ 8 ಕಡೆ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಆದರೆ ಮುಖ್ಯಮಂತ್ರಿಗಳು ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡುತ್ತಿಲ್ಲ. ವೈಮಾನಿಕ ಸಮೀಕ್ಷೆಯನ್ನೂ ಮಾಡುತ್ತಿಲ್ಲ, ಸಭೆಯನ್ನೂ ನಡೆಸುತ್ತಿಲ್ಲ.

ಇದಕ್ಕೆ ಮುಖ್ಯಮಂತ್ರಿಗಳು ಸ್ಪಷ್ಟೀಕರಣ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮಳೆ ಹೆಚ್ಚಿರುವುದರಿಂದ ವೈಮಾನಿಕ ಸಮೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ. ಹವಾಮಾನ ಪರಿಸ್ಥಿತಿ ಪ್ರತಿಕೂಲವಾಗಿರುವುದರಿಂದ ವೈಮಾನಿಕ ಸಮೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎನ್ನುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರಂತೆ. ಹಾಗಾಗಿ ಮುಖ್ಯಮಂತ್ರಿಗಳು ಬೆಳಗಾವಿಗೆ ಬರುತ್ತಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ – ನಾಳೆ ಸಿಎಂ ವೈಮಾನಿಕ ಸಮೀಕ್ಷೆ: ಎಲ್ಲಿ ಲ್ಯಾಂಡ್ ಆಗಲಿದ್ದಾರೆ?

 

 

Related Articles

Back to top button