Kannada NewsKarnataka NewsLatestPolitics

*ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡು ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯಪುರ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Home add -Advt

ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು.

ಕೆಂದ್ರದಿಂದ ಉತ್ತರವಿಲ್ಲ:
ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದರು.

ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ:
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳನ್ನು ಕೆಳಗಿಳಿಸಲು ಕಾಯುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ ಎಂದರು.

Related Articles

Back to top button