Kannada NewsLatestNationalPolitics

*ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ; ಸಿಎಂ ಸಿದ್ದರಾಮಯ್ಯ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಯಿತು.

Home add -Advt

ತೆಲಂಗಾಣ ನೂತನ ಸಿಎಂ ಆಗಿ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ಮುಂದಿನ 5 ವರ್ಷಗಳ ಕಾಲ ತೆಲಂಗಾಣವು ಜನಪರ, ಅಭಿವೃದ್ಧಿಶೀಲ, ಪಾರದರ್ಶಕ ಆಡಳಿತಕ್ಕೆ ಸಾಕ್ಷಿಯಾಗಲಿದೆ ಎಂಬ ಪೂರ್ಣ ಭರವಸೆಯಿದೆ. ರೇವಂತ್ ರೆಡ್ಡಿಯವರ ಆಯ್ಕೆಯಿಂದ ಕರ್ನಾಟಕ – ತೆಲಂಗಾಣ ರಾಜ್ಯಗಳ ಸ್ನೇಹ ಸಂಬಂಧ ನವಯುಗಕ್ಕೆ ಕಾಲಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.


Related Articles

Back to top button