Belagavi NewsBelgaum News

*ವಿದ್ಯುತ್ ಹರಿವು ಸಾರ್ವಜನಿಕರಿಗೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ – ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬೆಳಗಾವಿ ಜಿಲ್ಲೆಯ, ರಾಯಭಾಗ ತಾಲೂಕಿನ ಹಾಲಿ ಚಾಲ್ತಿಯಲ್ಲಿರುವ ೧೧೦ಕೆವಿ ರಾಯಭಾಗ-ಇಟ್ನಾಳ ವಿದ್ಯುತ್ ಪ್ರಸರಣ ಮಾರ್ಗದಿಂದ ’ಬೊಮ್ಮನಾಳ’ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿರುವ ೧೧೦/೧೧ಕೆವಿ ವಿದ್ಯುತ್ ಉಪ-ಕೇಂದ್ರಕ್ಕೆ ಲೀಲೋ ೦.೫೫೯ಕಿ.ಮೀ ಉದ್ದದ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಿಸಲಾಗಿದೆ.


ಸದರಿ ೧೧೦ ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿ ಹಾಗೂ ಬೊಮ್ಮನಾಳ ಅಕ್ಕಪಕ್ಕದ ಹದ್ದಿನಲ್ಲಿ ಬರುವ ಹಳ್ಳಿಗಳು ಮತ್ತು ಸರಹದ್ದಿನ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ.

ವಿದ್ಯುತ್ ಪ್ರಸರಣ ಮಾರ್ಗವನ್ನು ಜ ೨೫ ೨೦೨೪ ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್ ಹರಿಬಿಡಲಾಗುವದು, ಕಾರಣ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ ಅಥವಾ ತಂತಿಗಳನ್ನು ಮುಟ್ಟುವುದಾಗಲಿ ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆ/ಗುಡಿಸಲುಗಳನ್ನು ನಿರ್ಮಿಸುವುದಾಗಲಿ ಪ್ರಾಣಾಪಾಯಕವಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.


ಒಂದು ವೇಳೆ ಇಂತಹ ಕೃತ್ಯಗಳನ್ನು ಯಾರಾದರು ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ವಿ), ಬೃಹತ್ ಕಾಮಗಾರಿ ವಿಭಾಗ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಬೆಳಗಾವಿ ಜಿಲ್ಲೆಯ, ಗೋಕಾಕ ತಾಲೂಕಿನ ಹಾಲಿ ಚಾಲ್ತಿಯಲ್ಲಿರುವ ೧೧೦ಕೆವಿ. ಪಿ. ಜಿ. ಹುನಶ್ಯಾಳ ವಿದ್ಯುತ್ ಉಪ ಕೇಂದ್ರದಿಂದ ಹಡಗಿನಾಳ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿರುವ ವಿದ್ಯುತ್ ಉಪಕೇಂದ್ರಕ್ಕೆ ಜೋಡಿ ಗೋಪುರಗಳ ಮೇಲೆ ೬,೫೨೫ಕೀ.ಮಿ ಉದ್ದದ ಒಂಟಿ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಿಸಲಾಗಿದೆ.


ಸದರಿ ೧೧೦ ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪಿ. ಜಿ. ಹುನಶ್ಯಾಳ, ಬೀರನಗುಡ್ಡಿ, ಕಲಾರಕೊಪ್ಪ ಹಾಗೂ ಹಡಗಿನಾಳ ಅಕ್ಕಪಕ್ಕದ ಹದ್ದಿನಲ್ಲಿ ಬರುವ ಹಳ್ಳಿಗಳು ಮತ್ತು ಸರಹದ್ದಿನ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ.


ವಿದ್ಯುತ್ ಪ್ರಸರಣ ಮಾರ್ಗವನ್ನು ಜ ೨೫ ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್ತನ್ನು ಹರಿಬಿಡಲಾಗುವದು ಕಾರಣ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ ಅಥವಾ ತಂತಿಗಳನ್ನು ಮುಟ್ಟುವುದಾಗಲಿ ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆ/ಗುಡಿಸಲುಗಳನ್ನು ನಿರ್ಮಿಸುವುದಾಗಲಿ ಪ್ರಾಣಾಪಯವಾಬಹುದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.


ಒಂದು ವೇಳೆ ಇಂತಹ ಕೃತ್ಯಗಳನ್ನು ಯಾರಾದರು ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ವಿ), ಬೃಹತ್ ಕಾಮಗಾರಿ ವಿಭಾಗ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button