Kannada NewsKarnataka NewsLatestPolitics

*ಯಾವುದೇ ಕ್ಷಣದಲ್ಲಿ ಲೋಕಸಭಾ ಚುನಾವಣೆ ಘೋಷಣೆ: ಬಿ.ವೈ.ವಿಜಯೇಂದ್ರ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಯಾವುದೇ ಕ್ಷಣದಲ್ಲಾದರೂ ಲೋಕಸಭಾ ಚುನಾವಣೆ ಘೋಷಣೆಯಾಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ವಿಜಯೇಂದ್ರ, ಯಾವುದೇ ಕ್ಷಣದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಬಹುದು. ಹಾಗಾಗಿ ಕಾರ್ಯಕರ್ತರು, ಪಕ್ಷದ ನಾಯಕರು ಸಿದ್ಧತೆ ನಡೆಸಿಕೊಳ್ಳಬೇಕು ಎಂದರು.

ಏಪ್ರಿಲ್ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹಾಗಾಗಿ ಚುನಾವಣೆಗೆ ಸಿದ್ಧರಾಗಬೇಕು. ನಾವು ಯಾರನ್ನೂ ಹಗುರವಾಗಿ ತೆಗೆದುಕೊಳ್ಳುವುದು ಬೇಡ. ಪ್ರಧಾನಿ ಮೋದಿ ಸರ್ಕಾರದ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಆಗಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಾವೆಲ್ಲರೂ ಬಿಜೆಪಿ ಕಾರ್ಯಕರ್ತರು ಎಂಬ ಹೆಮ್ಮೆ ನಮಗಿದೆ ಎಂದು ಹೇಳಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button