Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಜಿಲ್ಲೆ ಹೆಚ್ಚುವರಿ ಎಸ್ ಪಿಯಾಗಿ ಶೃತಿ ನೇಮಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರ ಬೆನ್ನಲ್ಲೇ ಐವರು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸ್ಥಳ ನಿಯೋಜನೆಗೊಳಿಸಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡು ಸ್ಥಳ ನಿರೀಕ್ಷಣೆಯಲ್ಲಿದ್ದ ಎಸ್ ಪಿಗಳಿಗೆ ಇದೀಗ ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಎಸ್ ಪಿಯಾಗಿ ಶೃತಿ ಎಸ್.ಎನ್ ನ್ನೇಮಕಗೊಂಡಿದ್ದಾರೆ.

ಕರಿಬಸವನಗೌಡ – ವಿಧಾನಸೌಧ ಭದ್ರತಾ ವಿಭಾಗ -ಪೊಲೀಸ್ ಅಧೀಕ್ಷಕರು
ವೆಂಕಟೇಶ್ ಪ್ರಸನ್ನ – ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು
ರವಿಶಂಕರ್ ಸಿ.ಆರ್ ಕೋಲಾರ ಹೆಚ್ಚುವರಿ ಪೊಲೀಸ್ ಅಧಿಕ್ಷಕರು
ಪ್ರವೀಣ್ ಹೆಚ್.ನಾಯಕ್- ಕಲಬುರ್ಗಿ ನಗರ ಡಿಸಿಪಿ- ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ನೇಮಕ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button