Kannada NewsKarnataka NewsLatest

*ಶಿರಸಿಯಲ್ಲಿ ಮತಾಂತರಕ್ಕೆ ಯತ್ನ; 6 ಜನರ ಬಂಧನ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿಯೂ ಮತಾಂತರಕ್ಕೆ ಯತ್ನಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ಶಿರಸಿ ತಾಲೂಕಿನ ಜಗಳೇಮನೆ ಗ್ರಾಮದ ಆದರ್ಶ್ ನಾಯ್ಕ್ ಎಂಬುವವರ ಮನೆಗೆ ಬಂದಿದ್ದ 6 ಜನರು ಮತಾಂತರಕ್ಕೆ ಯತ್ನಿಸಿದ್ದಾರೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಬೇಕು, ಆರೋಗ್ಯ ಸುಧಾರಿಸಬೇಕು ಎಂದರೆ ಮನೆಯವರು ಕ್ರಿಶ್ಚಿಯನ್ ಧರ್ಮ ಸ್ವೀಕಾರ ಮಾಡಿ. ಏಸು ಕ್ರಿಸ್ತ ನಿಮಗೆ ಎಲ್ಲವನ್ನೂ ನೀಡುತ್ತಾನೆ. ನಿಮ್ಮ ಎಲ್ಲಾ ಕಷ್ಟ ದೂರ ಮಾಡುತ್ತಾನೆ ಎಂದು ಹೇಳಿದ್ದಾರೆ.

ನಾವು ಕೂಡ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದೇವೆ ಎಂದು ಹೇಳಿದ್ದಾರೆ. ಇದು ಮತಾಂತರ ಯತ್ನ ಎಂಬುದು ತಿಳಿಯುತ್ತಿದ್ದಂತೆ ಆದರ್ಶ ನಾಯ್ಕ್ ಶಿರಸಿ ಗ್ರಾಮೀಣ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಸದ್ಯ 6 ಜನರನ್ನು ಬಂಧಿಸಿದ್ದಾರೆ. ಪರಮೇಶ್ವರ್ ನಾಯ್ಕ್, ಸುನೀತಾ ನಾಯ್ಕ್, ಧನಂಜಯ ಶಿವಣ್ಣ, ಶಾಲಿನಿ ರಾಣಿ, ಕುಮಾರ ಲಮ್ಮಾಣಿ, ತಾರಾ ಲಮ್ಮಾಣಿ ಬಂಧಿತರು.

ಬಂಧಿತರಲ್ಲಿ ಇಬ್ಬರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನವರು ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button