Kannada NewsKarnataka NewsLatest

*ಮತ್ತೊಂದು ಅಮಾನವೀಯ ಘಟನೆ; ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ ಇನ್ನೊಂದು ಪ್ರಕರಣ ಬೆಳಕಿಗೆ*

ಪ್ರಗತಿವಾಹಿನಿ ಸುದ್ದಿ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವವ ವಿರುದ್ಧ ಈಗಾಗಲೇ ಹಲವು ಶಿಕ್ಷಕರು, ಪ್ರಾಂಶುಪಲರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದರೂ ರಾಜ್ಯದಲ್ಲಿ ಮತ್ತೆ ಇಂತದ್ದೇ ಪ್ರಕರಣಗಳು ಮರುಕಳಿಸುತ್ತಿವೆ.

ಶಾಲಾ ಬಾಲಕಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ದಾವಣಗೆರೆ ಜಿಲ್ಲೆಯ ಮೆಳ್ಳೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ಶಾಲಾ ಶೌಚಾಲಯ ಸ್ವಚ್ಚ ಮಾಡಿಸಲಾಗಿದೆ. ವಿದ್ಯಾರ್ಥಿನಿಯರು ಸಮವಸ್ತ್ರದಲ್ಲಿಯೇ ಟಾಯ್ಲೇಟ್ ಕ್ಲೀನ್ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಲೆಯ ಮುಖ್ಯ ಶಿಕ್ಷಕಿ ಹೈಸ್ಕೂಲು ಮಕ್ಕಳಿಂದ ಈ ಕೆಲಸ ಮಾಡಿಸಿದ್ದಾರೆ.

ಗಾಂಧೀಜಿ ಸ್ವತಃ ತಮ್ಮ ಶೌಚಾಲಯವನ್ನು ತಾವೇ ಸ್ವಚ್ಛ ಮಾಡಿಕೊಳ್ಳುತ್ತಿದ್ದರು. ನೀವು ಸ್ವಚ್ಛಗೊಳಿಸಿ ಎಂದು ಶಿಕ್ಷಕಿ ಶಾಲಾ ಮಕ್ಕಳಿಗೆ ಹೇಳಿದ್ದರಂತೆ. ಶಾಲೆಯ ಸಿಬ್ಬಂದಿ, ಮುಖ್ಯಶಿಕ್ಷಕಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button