Kannada NewsKarnataka NewsLatestPolitics

*ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ ಪಕ್ಷದ ನಿಲುವಿಗೂ ಸಂಬಂಧವಿಲ್ಲ; ಆರ್.ಅಶೋಕ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಭಾರತದ ಸಂವಿಧಾನದ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ಅವರು ನೀಡಿರುವ ಹೇಳಿಕೆಗೂ ಭಾರತೀಯ ಜನತಾ ಪಕ್ಷದ ಅಧಿಕೃತ ನಿಲುವಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷಕ್ಕೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂವಿಧಾನ ಎಂದರೆ ಕೇವಲ ಒಂದು ಗ್ರಂಥವಲ್ಲ. ಸಂವಿಧಾನ ಅಂದರೆ ನಮ್ಮ ದೇಶದ ಸ್ವಾತಂತ್ಯಕ್ಕಾಗಿ ಹೋರಾಡಿದ, ಬಲಿದಾನಗೈದ ಅಸಂಖ್ಯಾತ ಮಹನೀಯರ ತ್ಯಾಗದ ದ್ಯೋತಕ, ಆಶಯಗಳ ಪ್ರತೀಕ.

ಸಂವಿಧಾನಕ್ಕೆ ಅಪಚಾರ ಮಾಡುವ ಅಥವಾ ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಕೆಲಸವನ್ನ ಬಿಜೆಪಿ ಈ ಹಿಂದೆಯೂ ಮಾಡಿಲ್ಲ, ಮುಂದೆಂದಿಗೂ ಮಾಡುವುದೂ ಇಲ್ಲ. ಅಷ್ಟೇ ಅಲ್ಲ ಅಂತಹ ಮಾತು ಆಡುವುದನ್ನು ಸಹಿಸುವುದೂ ಇಲ್ಲ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button