Kannada NewsKarnataka NewsLatest

ನೂತನ ಸಚಿವ ಲಕ್ಷ್ಮಣ ಸವದಿ  ಬುಧವಾರ ಬೆಳಗಾವಿಗೆ

ನೂತನ ಸಚಿವ ಲಕ್ಷ್ಮಣ ಸವದಿ  ಬುಧವಾರ ಬೆಳಗಾವಿಗೆ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ನೂತನ ಸಚಿವರಾದ ಲಕ್ಷ್ಮಣ ಸವದಿ ಅವರು ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಬೆಂಗಳೂರಿನಿಂದ ಬೆಳಿಗ್ಗೆ 11.30 ಗಂಟೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರವಾಹಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.

 

ಹಾರ-ತುರಾಯಿ ಬೇಡ-ಸಚಿವರ ಮನವಿ:

 

ಸಚಿವರಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಆಗಮಿಸುತ್ತಿರುವುದರಿಂದ ತಮ್ಮ ಸ್ವಾಗತಕ್ಕೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಾರ-ತುರಾಯಿ ತರಬಾರದು ಎಂದು ಸಚಿವ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ.

 

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಥವಾ ಅಹವಾಲುಗಳನ್ನು ತಿಳಿಸಿದರೆ ಸಾಕು. ಜಿಲ್ಲೆಯ ಜನರು ಪ್ರವಾಹದಿಂದ ಬಾಧಿತಗೊಂಡಿರುವ ಈ ಸಂದರ್ಭದಲ್ಲಿ ತಮ್ಮ ಸ್ವಾಗತಕ್ಕೆ ಯಾರೂ ಕೂಡ ಹಾರ-ತುರಾಯಿ ತರುವುದು ಬೇಡ ಎಂದು ಅವರು ತಿಳಿಸಿದ್ದಾರೆ.

 

ಪ್ರವಾಹ ಪರಿಸ್ಥಿತಿ, ಪುನರ್ವಸತಿ ಮತ್ತಿತರ ವಿಷಯಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಗುರುವಾರದಿಂದ ಗೋಕಾಕ, ಕಿತ್ತೂರು ತಾಲ್ಲೂಕುಗಳು ಸೇರಿದಂತೆ ಪ್ರವಾಹ ಬಾಧಿತ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಅಹವಾಲು ಆಲಿಸುತ್ತೇನೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button