Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಭೀಕರ ಅಪಘಾತ; ರೈತ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಗೂಡ್ಸ್ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಸುವರ್ಣಸೌಧದ ಬಳಿಯ ಬಸ್ತವಾಡ ಗ್ರಾಮದಲ್ಲಿ ನಡೆದಿದೆ.

ಗೂಡ್ಸ್ ವಾಹನ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕರ್ ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ತವಾಡಗಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ್ (41) ಮೃತ ದುರ್ದೈವಿ.

ಬೆಳಗಾವಿ ಮಾರ್ಕೆಟ್ ಗೆ ಕೊತ್ತಂಬರಿ ಸೊಪ್ಪನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಕೊಂಡು ಸಾಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಗೂಡ್ಸ್ ವಾಹನ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದೆ. ಅಪಘಾತದ ರಭಸಕ್ಕೆ ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button