Kannada NewsKarnataka NewsLatest

*ಹೋಟೆಲ್ ಪರವಾನಿಗೆಗೆ ಲಂಚಕ್ಕೆ ಬೇಡಿಕೆ; ಅಧಿಕಾರಿ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ಗೆ ಪರವಾನಿಗೆ ನೀಡಲು 9 ಸಾವಿರ ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಮಂಗಳೂರು ಮೂಲದ ಹೋಟೆಲ್ ಮಾಲಿಕ ದಕ್ಷೀತ್ ಶೆಟ್ಟಿ ಅವರ ದೂರಿನ ಮೇರೆಗೆ ಲೋಕಾಯುಕ್ತ ಎಸ್.ಪಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಇನ್ಸ್ಪೆಕ್ಟರ್ ಹಾಲಪ್ಪ ಬಲದಂಡಿ ಮತ್ತು ತಂಡ, 9 ಸಾವಿರಕ್ಕೆ ಬೆಡಿಕೆ ಇಟ್ಟು 9 ಸಾವಿರ ಹಣ ಸ್ಚಿಕರಿಸುವಾಗ ಕಾರ್ಮಿಕ ಇಲಾಖೆಯ ಇನ್ಸ್ಪೆಕ್ಟರ್ ಭೋಪಾಲ್ ಅವರು ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯನ್ನು ವಶಕ್ಕೆ ಪಡೆದು ಡಿವೈಎಸ್ ಪಿ ನಾಗೇಶ್ ನೇತೃತ್ವದಲ್ಲಿ ವಿಚಾರಣೆ ಮಾಡಲಾಗುತ್ತಿದ್ದು, ತನಿಖೆ ಮುಂದುವರೆದಿದೆ.‌

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button