Kannada NewsKarnataka NewsLatest

*ಭೀಕರ ಅಪಘಾತ: ತಂದೆ-ಮಗ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಯುಗಾದಿ ಹಬ್ಬದ ದಿನವೇ ಭೀಕರ ಅಪಘಾತ ಸಂಭವಿಸಿದ್ದು, ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದ ಹೊನೇಗಲ್ ಗ್ರಾಮದಲ್ಲಿ ಬೈಕ್ ಅಪಘಾತದಲ್ಲಿ ತಂದೆ ಹಾಗೂ ಮಗ ಮೃತಪಟ್ಟಿದ್ದಾರೆ. ತಂದೆ ಗಂಗಿರೆಡ್ಡಿ (41) ಹಾಗೂ ಮಗ ಆದರ್ಶ ಮೃತ ದುರ್ದೈವಿಗಳು. ಚಿಕ್ಕಬಳ್ಳಾಪುರದ ಚೇಳೂರು ಮೂಲದವರು.

ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಡಿವೈ ಎಸ್ ಪಿ ಶಿವಕುಮಾರ್ ಹಾಗೂ ಪೊಲಿಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button