Kannada NewsKarnataka NewsLatest
*ಭೀಕರ ಅಪಘಾತ; ಕೆ ಎಸ್ ಆರ್ ಪಿ ಕಮಾಂಡೆಂಟ್ ಸೇರಿ ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕರ್ನಾಟಕದ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಮೃತಪಟಿರುವ ಘಟನೆ ನಡೆದಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ಐವರು ಪೊಲೀಸ್ ಧಿಕಾರಿಗಳು ತೆರಳುತ್ತಿದ್ದ ಜೀಪ್ ಹಾಗೂ ಬಸ್ ನಡುವೆ ಭೀಕರ ಅಪಘತ ಸಂಭವಿಸಿದೆ. ಕರ್ನಾಟಕದ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.
ಮೂವರಿಗೆ ಗಂಭೀರ ಗಾಯಗಳಾಗಿವೆ. ಕೆ ಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡು ಕಾನ್ಸ್ ಟೇಬಲ್ ದಿನೇಶ್ ಮೃತರು,
ಅಪಘಾತದ ರಭಸಕ್ಕೆ ಜೀಫ್ಛಿದ್ರವಾಗಿದೆ. ಬಸ್ ಮುಂಭಾಗ ಕೂಡ ಹಾನಿಗೊಂಡಿದೆ.




