Kannada NewsKarnataka NewsLatest

*ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ-ಮಗಳ ಜಗಳ; ವಿದ್ಯಾರ್ಥಿನಿ ಸಾವಿನಲ್ಲಿ ಅಂತ್ಯ*

ಪ್ರಗತಿವಾಹಿನಿ ಸುದ್ದಿ: ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಹಾಗೂ ಮಗಳ ನಡುವೆ ವಾಗ್ವಾದ ನಡೆದು ಪರಸ್ಪರ ಚಾಕು ಇರತದಲ್ಲಿ ಪುತ್ರಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನಶಂಕರಿಯ ಶಾಸ್ತ್ರಿ ನಗರದಲ್ಲಿ ನಡೆದಿದೆ.

ಸಾಹಿತಿ ಮೃತ ಮಗಳು. ಪದ್ಮಜಾ ಮಗಳಿಗೆ ಚಾಕು ಇರಿದ ತಾಯಿ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಗಳು ಸಾಹಿತಿ ಪಾಸ್ ಆಗಿದ್ದಳು. ಆದರೆ ಕಡಿಮೆ ಅಂಕ ಬಂದಿದೆ ಎಂದು ಮಗಳ ಜೊತೆ ತಾಯಿ ಜಗಳವಾಡಿದ್ದಳು.

ಇಬ್ಬರ ನಡುವೆ ವಾಗ್ವಾದ ತಾರಕಕ್ಕೇರಿ ತಾಯಿ, ಪುತ್ರಿ ಪರಸ್ಪರ ಚಾಕುವಿನಿಂದ ಇರಿದು ಕೊಂಡಿದ್ದಾರೆ. ತೀವ್ರ ರಕ್ತಸ್ರಾವವಾಗಿ ಸಾಹಿತಿ ಮೃತಪಟ್ಟಿದ್ದಾಳೆ. ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಮೃತ ಸಾಹಿತಿಗೆ 4-5 ಕಡೆ ಚಾಕು ಇರಿಯಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button