Kannada NewsKarnataka NewsPolitics

*ಪ್ರಜ್ವಲ್ ರೇವಣ್ಣ ಪತ್ತೆಗೆ ಬಹುಮಾನ ಘೋಷಿಸಿದವರನ್ನು ಅರೆಸ್ಟ್ ಮಾಡಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ:  ಸಂಸದ ಪ್ರಜ್ವಲ್​​ ರೇವಣ್ಣರನ್ನು ಹುಡುಕಿಕೊಟ್ಟರೆ ಅಥವಾ ಅವರು ಎಲ್ಲಿದ್ದಾರೆಂದು ಸುಳಿವು ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಜನತಾ ಪಕ್ಷ ಪೋಸ್ಟರ್ ಆಂಟಿಸುವ ಮೂಲಕ ಅಭಿಯಾನ ನಡೆಸಿದೆ.‌

ಬೆಂಗಳೂರಿನ ಶಿವಾನಂದ ಸರ್ಕಲ್​ ಸೇರಿ ವಿವಿಧೆಡೆ ಜನತಾ ಪಕ್ಷ ಪೋಸ್ಟರ್ ಅಂಟಿಸುವ ಮೂಲಕ ಪ್ರಜ್ವಲ್ ರೇವಣ್ಣ ಅವರ ಸುಳಿವು ಅಥವಾ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ಘೋಷಣೆ ಮಾಡಿದೆ. 

ಈ ಸಂಬಂಧ ಪೋಸ್ಟರ್​ಗಳನ್ನು ತೆರವುಗೊಳಿಸಿರುವ ಪೊಲೀಸರು, ಜನತಾ ಪಕ್ಷದ ಮುಖಂಡ ನಾಗೇಶ್​ ಸೇರಿದಂತೆ ಕಾರ್ಯಕರ್ತರನ್ನು ಇದೀಗ ತಮ್ಮ ವಶಕ್ಕೆ ಪಡೆದಿದ್ದಾರೆ‌.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button