National

*ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೊಟ; 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಪುರಿ ಜಗನ್ನಾಥ ಮಂದಿರದ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡ ಪರಿಣಾಮ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಒಡಿಶಾದ ಪುರಿಯಲ್ಲಿ ಜಗನ್ನಾಥ ಉತ್ಸವ ನಡೆಯುತ್ತಿದ್ದು, ಈ ವೇಳೆ ಈ ಘಟನೆ ನಡೆದಿದೆ. ಚಂದನ್ ಯಾತ್ರೆ ಆಚರಣೆ ಅಂಗವಾಗಿ ನರೇಂದ್ರ ಕೊಳದಲ್ಲಿ ನಡೆದ ಟ್ರಿನಿಟಿಯ ಚಾಪಾ ಖೇಲಾ ಕಾರ್ಯಕ್ರಮದ ವೇಳೆ ಈ ಅವಘಡ ಸಂಭವಿಸಿದೆ.

ಕೆರೆಯ ದೇವಿಘಾಟ್ ಬಳಿ ಪಟಾಕಿ ಸಿಡಿಸಲು ಅವಕಾಶವಿತ್ತು. ಈ ವೇಳೆ ಸಿಡಿಸಿದ ಪಟಾಕಿ ಕಿಡಿಗಳು ಪವಿತ್ರಕೊಳದಲ್ಲಿ ಜಲಕ್ರೀಡೆ ವೀಕ್ಷಿಸುತ್ತಿದ್ದ ಭಕ್ತರ ಮೇಲೆ ಬಿದ್ದಿದೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button