Latest

*ಉತ್ತರಾಖಂಡದಲ್ಲಿ ದುರಂತ ಪ್ರಕರಣ: ಮೂವರು ಚಾರಣಿಗರ ಮೃತದೇಹ ಬೆಂಗಳೂರಿಗೆ; ಕುಟುಂಬಕ್ಕೆ ಹಸ್ತಾಂತರ*

ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡನ ಉತ್ತರ ಕಾಶಿಯಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಜನರು ದಿಡಿರ್ ಹಿಮಪಾತದಿಂದಾಗಿ ಸಾವನ್ನಪ್ಪಿದ್ದು, ಅವರಲ್ಲಿ ಮೂವರು ಕನ್ನಡಿಗರ ಮೃತದೇಹವನ್ನು ಬೆಂಗಳೂರಿಗೆ ರವಾನಿಸಲಾಗಿದೆ.

ಅದ್ಮಿನಿ ಹೆಗಡೆ, ವೆಂಕಟೇಶ್ ಪ್ರಸಾದ್ ಕೆ, ಆಶಾ ಎಂಬುವವರ ಮೃತದೇಹ ಬೆಂಗಳೂರಿಗೆ ಆಗಮಿಸಿದೆ. ಪದ್ಮಿನಿ ಹೆಗಡೆ (35) ಮೂಲತಃ ಸುತ್ತರ ಕನ್ನಡ ಜಿಲ್ಲೆಯ ಶಿರಸಿಯವರಾಗಿದ್ದು, ಬೆಂಗಳೂರಿನ ಗೂಗಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿಂದೆಯೂ ಹಲವು ಬಾರಿ ಚಾರಣಕ್ಕೆ ಯಶಸ್ವಿಯಾಗಿ ಹೋಗಿ ಬಂದಿದ್ದು, ಆದರೆ ಈ ಬಾರಿ ಚಾರಣಕ್ಕೆ ತೆರಳಿದ್ದ ವೇಳೆ ದುರಂತಕ್ಕೀಡಾಗಿದ್ದಾರೆ.

ಇದೀಗ ಮೂವರ ಮೃತದೇಹ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಉಳಿದ ಮೃತದೇಹ ಮಧ್ಯಾಹ್ನದ ಬಳಿಕ ಆಗಮಿಸುವ ಸಾಧ್ಯತೆ ಇದೆ.

Home add -Advt

Related Articles

Back to top button