Latest

*ಭವಾನಿ ರೇವಣ್ಣಗೆ ಹೈಕೋರ್ಟ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮನೆ ಕೆಲಸದ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಮಧ್ಯಂತರ ಜಾಮೀನು ಸಿಕ್ಕಿದರೂ ಭವನಿ ರೇವಣ್ಣಗೆ ಸಂಕಷ್ಟ ತಪ್ಪಿಲ್ಲ. ಮಧ್ಯಾಹ್ನ 1 ಗಂಟೆಯೊಳಗೆ ಎಸ್ಐಟಿ ಮುಂದೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ. ಇನ್ನು ಮಧ್ಯಂತರ ಜಾಮೀನು ಮುಂದಿನ ಶುಕ್ರವಾರದವರೆಗೆ ಮಾತ್ರ ಅನ್ವಯವಾಗಲಿದ್ದು, ಎಸ್ಐಟಿಯ ತನಿಖೆಗೆ ಸಹಕರಿಸುವಂತೆ ತಿಳಿಸಿದೆ.

ಮುಖ್ಯವಾಗಿ ಹಾಸನ ಜಿಲ್ಲೆ ಪ್ರವೇಶ ಮಡುವಂತಿಲ್ಲ, ಕೆ.ಆರ್.ನಗರಕ್ಕೂ ಹೋಗುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button