Kannada NewsKarnataka NewsLatestNational

*ಮಠದ ಆವರಣದಲ್ಲಿಯೇ ಸ್ವಾಮೀಜಿಯ ಭೀಕರ ಕೊಲೆ*

ಪ್ರಗತಿವಾಹಿನಿ ಸುದ್ದಿ : ಮಠದ ಆವರಣದಲ್ಲಿಯೇ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈಯಲಾಗಿದೆ.

Home add -Advt

ಮೈಸೂರಿನ ಸಿದ್ಧಾರ್ಥನಗರ ಸಮೀಪದಲ್ಲಿರುವ ಬನ್ನೂರು ರಸ್ತೆಯಲ್ಲಿನ ಅನ್ನದಾನೇಶ್ವರ ಮಠದ ಆವರಣದಲ್ಲಿಯೇ ಇಂದು ಈ ಕೃತ್ಯ ನಡೆದಿದ್ದು, ರಾಜ್ಯವೇ ಬೆಚ್ಚಿ ಬಿದ್ದಿದೆ. 

ಆರೋಪಿ ರವಿ (60) ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಆತ, ಸ್ವಾಮೀಜಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಆಸ್ತಿ ವಿಚಾರದಲ್ಲಿ ಇದ್ದ ತಕರಾರು ಕಾರಣ ಎನ್ನಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ನಜರ್‌ಬಾದ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button