Kannada NewsKarnataka News

ಸ್ಮಾರ್ಟ ಸಿಟಿ ಯೋಜನೆಯಡಿಯಲ್ಲಿ ಸ್ಮಾರ್ಟ ಕ್ಲಾಸ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಸ್ಮಾರ್ಟ ಸಿಟಿ ಯೋಜನೆಯಡಿಯಲ್ಲಿ ಸ್ಮಾರ್ಟ ಕ್ಲಾಸ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ ಶಾಸಕ ಅನಿಲ ಬೆನಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನಗರದ ಖಂಜರ ಗಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಸಿಟಿ ಅನುದಾನದಡಿ ರೂ. ೪೯ ಲಕ್ಷಗಳಲ್ಲಿ ಸ್ಮಾರ್ಟ್ ಕ್ಲಾಸ್ ನಿರ್ಮಾಣ ಕಾಮಗಾರಿಗೆ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ  ಭೂಮಿ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸ್ಮಾರ್ಟ ಸಿಟಿ ಅಡಿಯಲ್ಲಿ ಸ್ಮಾರ್ಟ ಕ್ಲಾಸ್‌ಗಳನ್ನು ನಿರ್ಮಿಸಲಾಗುತ್ತಿದೆ. ಈ ಕೊಠಡಿಯು ಹವಾ ನಿಯಂತ್ರಿತ ಕೊಠಡಿಯಿಂದ ಕೂಡಿದ್ದು, ೨೦ ಗಣಕಯಂತ್ರಗಳು, ಸ್ಮಾರ್ಟ್ ಬೋರ್ಡ್, ಎಲ್.ಇ.ಡಿ. ಸ್ಕ್ರೀನ್, ವ್ಯವಸ್ಥಿತ ಖುರ್ಚಿಗಳು ಹಾಗೂ ಇತರೆ ಅತ್ಯಾಧಿನಿಕ ವ್ಯವಸ್ಥೆಯು ಇದರಲ್ಲಿ ಇರುತ್ತದೆ ಎಂದು ತಿಳಿಸಿದರು. ಶಿಕ್ಷಕರು ಇದರ ಉಪಯೋಗವನ್ನು ವಿದ್ಯಾರ್ಥಿಗಳಿಗೆ ಒದಗಿಸಿಕೊಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರೊಂದಿಗೆ ಸ್ಮಾರ್ಟ ಸಿಟಿ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ರುಕಯ್ಯ ಹಡಲಗೆ, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button