Kannada NewsKarnataka NewsNationalPolitics

*ಸಂಗೀತ ಲೋಕದ ಅನರ್ಘ್ಯ ರತ್ನ ಕಣ್ಮರೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂತಾಪ*

ಪ್ರಗತಿವಾಹಿನಿ ಸುದ್ದಿ: ವಿಶ್ವ ಶ್ರೇಷ್ಠ ಸರೋದ್ ವಾದಕ, ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ ಅವರ ಅಗಲಿಕೆಗೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜೀವ್ ತಾರಾನಾಥ ಅವರ ಅಗಲಿಕೆಯಿಂದ ಇಂದು ಭಾರತದ ಸಂಗೀತ ಲೋಕ ಒಂದು ಅನರ್ಘ್ಯ ರತ್ನವನ್ನು ಕಳೆದುಕೊಂಡಂತಾಗಿದೆ ಎಂದು ಜೋಶಿ ವಿಷಾದಿಸಿದ್ದಾರೆ.

ರಾಜೀವ್ ಅವರ ನಿಧನದಿಂದ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಹಾಗೂ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button