Belagavi NewsBelgaum NewsKannada NewsKarnataka NewsNational

*ಆರೋಗ್ಯಕರ ಜೀವನಕ್ಕೆ ದಿನನಿತ್ಯ ಯೋಗ ಪದ್ಧತಿ ಅಳವಡಿಸಿಕೊಳ್ಳಿ: ಸಂಸದ ಜಗದೀಶ್ ಶೆಟ್ಟರ್ *

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆರೋಗ್ಯಕರ ಬದುಕಿಗೆ ಯೋಗ ಅತ್ಯಗತ್ಯ. ಪ್ರತಿದಿನವು ಯೋಗ ಮಾಡುವುದರಿಂದ ಮನಸ್ಸಿನ ಹಾಗೂ ದೇಹದ ಆರೋಗ್ಯ ಉತ್ತಮ ಪಡಿಸಿಕೊಳ್ಳಬಹುದು. ಯೋಗದಿಂದ ಬೌದ್ಧಿಕ ಬೆಳವಣಿಗೆ ಜತೆಗೆ ಸಾಮಾಜಿಕ ಬದುಕಿನಲ್ಲಿ ಉತ್ತಮ ಜೀವನ ನಡೆಸಲು ಸಹಕಾರಿಯಾಗಲಿದೆ. ಇಂದಿನ ಯುವ ಪೀಳಿಗೆ ತಮ್ಮ ದಿನಚರಿಯಲ್ಲಿ ಯೋಗ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು  ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ (ಜೂ.21) ಕೆಪಿಟಿಸಿಎಲ್ ಭವನದಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮನುಷ್ಯ ಆಧುನಿಕ ಒತ್ತಡದಿಂದ ಕಲಬೆರಿಕೆ ಆಹಾರದಿಂದ ಶ್ರಮರಹಿತ ಜೀವನದಿಂದ ವೈಜ್ಞಾನಿಕ ಸಾಧನಗಳ ದುರ್ಬಳಕೆ ಹಾಗೂ ದುಶ್ಚಟಗಳಿಂದ ಅನೇಕ ರೋಗಗಳಿಗೆ ಬಲಿಯಾಗಿದ್ದಾನೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಎಂದರೆ ಪ್ರಕೃತಿಯನ್ನು ಅರ್ಥಮಾಡಿಕೊಂಡು ಸಹಜ, ಸರಳ, ಬದುಕಿವ ಜತೆಗೆ ತನ್ನಂತೆ ಇತರೆ ಜೀವಿಗಳಿಗೆ ಬದುಕುವ ಅವಕಾಶ ಕಲ್ಪಿಸಿಕೊಡಬೇಕು ಎಂದರು.

ವಿದೇಶಗಳಲ್ಲಿ ಯೋಗ ಜನಪ್ರಿಯತೆ ಗಳಿಸಿದೆ. ಯೋಗ ಮಾಡುವುದರಿಂದ ಆರೋಗ್ಯಕರ ಜೀವನಶೈಲಿ ರೂಪಗೊಳ್ಳಲಿದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ದಿನಚರಿಯಲ್ಲಿ ಯೋಗ  ಪದ್ಧತಿ ರೂಡಿಸಿಕೊಳ್ಳಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಅವರು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ ಸುಣಧೋಳಿ, ಜರ್ಮನಿ ಹಾಗೂ ಇಂಗ್ಲೆಂಡ್ ದೇಶದ ಯೋಗ ಪಟುಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿಗಳು, ಎನ್.ಜಿ. ಓ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button