Kannada NewsKarnataka NewsNational

ಕಾಫಿ ತೋಟದ ಕೆರೆಗೆ ಬಿದ್ದು ಕಾಡಾನೆ ಸಾವು

ಪ್ರಗತಿವಾಹಿನಿ ಸುದ್ದಿ: ಕಾಫಿ ತೋಟದ ಕೆರೆಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿ ಸಮೀಪದಲ್ಲಿ ನಡೆದಿದೆ. 

ಒಂಟಿಯಂಗಡಿಯ ಪಚ್ಚಾಟ್ ನ ಮುಕ್ಕಾಟೀರ ನಂದ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ತೋಟಕ್ಕೆ ನೀರುಣಿಸಲು ಕೆರೆ ತೋಡಲಾಗಿತ್ತು. ಕಾಡಾನೆಗಳ ಗುಂಪು ಆಹಾರ ಅರಸಿ ತೋಟಕ್ಕೆ ಬಂದಿದ್ದು,  ಈ ವೇಳೆ 15 ವರ್ಷ ಪ್ರಾಯದ ಗಂಡಾನೆ ನೀರಿಗೆ ಬಿದ್ದು ಮೃತಪಟ್ಟಿದೆ. 

ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ  ಅಧಿಕಾರಿಗಳ ತಂಡ ಭೇಟಿ ನೀಡಿ ಜೆಸಿಬಿ ಮೂಲಕ ಆನೆಯ ಮೃತದೇಹವನ್ನು ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ರವಾನಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button