Latest

*ಹಾಡಹಗಲೇ ಉದ್ಯಮಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ*

ಪ್ರಗತಿವಾಹಿನಿ ಸುದ್ದಿ; ಹಾಡಹಗಲೇ ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿ ಮನಬಂದಂತೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.

ಉದ್ಯಮಿ ಶಿವಕುಮಾರ್ ಎಂಬುವವರ ಮೇಲೆ 8 ಬಾರಿ ದುಷ್ಕರ್ಮಿ ಫೈರಿಂಗ್ ಮಾಡಿದ್ದು, ಶಿವಕುಮಾರ್ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಉದ್ಯಮಿ ಶಿವಕುಮಾರ್ ತಮ್ಮ ಫಾರ್ಚುನರ್ ಕಾರಿನಲ್ಲಿ ಇದ್ದರು. ಈ ವೇಳೆ ಅನುದೀಪ್ ಎಂಬಾತ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ.

ಕ್ಷುಲ್ಲಕ ಕಾರಣಕ್ಕಾಗಿ ಅನುದೀಪ್, ಉದ್ಯಮಿ ಶಿವಕುಮಾರ್ ಮೇಲೆ ಗುಂಡು ಹಾರಿಸಿದ್ದು, ಕುಶಾಲ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button