Politics

*ನಿಗಮ ಮಂಡಳಿ ನಿರ್ದೇಶಕರು, ಸದಸ್ಯರ ಆಯ್ಕೆಗೆ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಕ ಮಾಡಿರುವ ರಾಜ್ಯ ಸರ್ಕರ, ನಿರ್ದೇಶಕರು, ಸದಸ್ಯರ ಆಯ್ಕೆಗಾಗಿ ಸಮಿತಿ ರಚನೆ ಮಾಡಿದೆ.

ನಿಗಮ ಮಂಡಳಿ ನಿರ್ದೇಶಕರು, ಸದಸ್ಯರ ಆಯ್ಕೆಗಾಗಿ ಸಚಿವರು, ಶಾಸಕರನ್ನೊಳಗೊಂಡ ಮೂವರ ಸಮಿತಿ ರಚನೆ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮಿತಿ ಅಧ್ಯಕ್ಷರಾಗಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಾಸಕ ರಿಜ್ವಾನ್ ಅರ್ಷದ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button