ಪ್ರಗತಿವಾಹಿನಿ ಸುದ್ದಿ: ಮೇ 19 ರಂದು ಪುಣೆಯ ಕಲ್ಯಾಣಿ ನಗರದಲ್ಲಿ 17 ವರ್ಷದ ಬಾಲಕ ಕುಡಿದ ಅಮಲಿನಲ್ಲಿ ಪೋರ್ಷೆ ಕಾರು ಚಲಾಯಿಸಿ ಇಬ್ಬರು ಎಂಜಿನಿಯರ್ಗಳ ಸಾವಿಗೆ ಕಾರಣವಾಗಿದ್ದ, ಆತನನ್ನು ಬಂಧಿಸಿ ವೀಕ್ಷಣಾ ಕೇಂದ್ರದಿಂದ ಇಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶ ನೀಡಿದೆ.
ಪುಣೆ ಪೋರ್ಷೆ ಅಪಘಾತದ ಅಪ್ರಾಪ್ತ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಮಂಗಳವಾರ ಬಾಂಬೆ ಹೈಕೋರ್ಟ್ ಈ ಆದೇಶ ಹೊರಡಿಸಿದ್ದು, ಪುಣೆ ಪೋರ್ಷೆ ಕಾರು ಅಪಘಾತದ ಅಪ್ರಾಪ್ತ ಆರೋಪಿಯನ್ನು ವೀಕ್ಷಣಾ ಕೇಂದ್ರದಿಂದ ಬಿಡುಗಡೆ ಮಾಡುವಂತೆ ಸೂಚಿಸಿದೆ.