Latest

*RTO ಅಧಿಕಾರಿ ಸೇರಿ ಮೂವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ರಾಮನಗರದ ಆರ್ ಟಿ ಒ ಅಧಿಕಾರಿ ಸೇರಿದಂತೆ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಆರ್ ಟಿ ಒ ಅಧಿಕಾರಿ ಶಿವಕುಮಾರ್, ಎಸ್ ಡಿಎ ರಚಿತ್ ರಾಜ್, ಬ್ರೊಕರ್ ಸತೀಶ್ ಬಂಧಿತ ಆರೋಪಿಗಳು. ಮೂವರ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಹಳೇ ಟ್ರ್ಯಾಕ್ಟರ್ ಗಳಿಗೆ ಹೊಸ ದಾಖಲೆಗಳನ್ನು ಸೃಷ್ಟಿಸಿದ್ದ ಬಂಧಿತ ಅಧಿಕಾರಿಗಳು, ಸೀಜ್ ಮಾಡಿದ್ದ ವಾಹನಗಳ ದಾಖಲೆಗಳನ್ನು ನೀಡಿದ್ದರು. ಸುಮಾರು 2000 ಟ್ರ್ಯಾಕ್ಟರ್ ಗಳಿಗೆ ಇದೇ ರೀತಿ ದಾಖಲೆಗಳನ್ನು ನೀಡಿ ಸರ್ಕಾರಕ್ಕೆ ವಂಚಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ.

Home add -Advt

Related Articles

Back to top button